BengaluruPolitics

ಜೆಡಿಎಸ್‌ನವರೆಲ್ಲಾ ಕಾಂಗ್ರೆಸ್‌ ಸೇರಿಕೊಳ್ಳಿ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋತರೆ ಜೆಡಿಎಸ್‌ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಅಂತ ಕುಮಾರಸ್ವಾಮಿಯವರು ಹೇಳುತ್ತಿದ್ದಾರೆ. ಹೀಗಾಗಿ ಜೆಡಿಎಸ್‌ನವರೆಲ್ಲಾ ಈಗಲೇ ಕಾಂಗ್ರೆಸ್‌ ಪಕ್ಷ ಸೇರಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕರೆ ನೀಡಿದ್ದಾರೆ.

ಸದಾಶಿವನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್‌ ಪಕ್ಷದವರು ಸುಮಾರು ಜನ ನಮ್ಮ ಪಕ್ಷಕ್ಕೆ ಸೇರಿಕೊಳ್ಳುತ್ತಿದ್ದಾರೆ. ನಾವು ಜೆಡಿಎಸ್‌ ಪಕ್ಷದ ಮುಖಂಡರಿಗೆ ಹೇಳುತ್ತಾ ಬಂದಿದ್ದೇವೆ. ನೋಡಿ ನಿಮ್ಮ ಪಕ್ಷವನ್ನು ಕುಮಾರಸ್ವಾಮಿ ವಿಸರ್ಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಈಗಲೇ ಬಂದು ಕಾಂಗ್ರೆಸ್‌ ಸೇರಿಕೊಳ್ಳಿ ಎಂದು ಆ ಪಕ್ಷದ ಮುಖಂಡರಿಗೆ ಆಹ್ವಾನ ನೀಡುತ್ತಿದ್ದೇವೆ ಎಂದು ಹೇಳಿದರು.

Share Post