BengaluruPolitics

ಕೆಟ್ಟ ಸರ್ಕಾರ ಉರುಳಿಸಲು ಮೈತ್ರಿ ಅಗತ್ಯ; ರಮೇಶ್‌ ಜಾರಕಿಹೊಳಿ

ಬೆಂಗಳೂರು; ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ. ಅದನ್ನು ತೆಗೆಯೋದಕ್ಕಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಗತ್ಯವಿದೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಕುಮಾರಸ್ವಾಮಿಯವರನ್ನು ಅವರ ಜೆಪಿ ನಗರದ ನಿವಾಸದಲ್ಲಿ ಭೇಟಿಯಾದ ನಂತರ ಜಾರಕಿಹೊಳಿ ಮಾತನಾಡಿದರು.

ಮೈತ್ರಿ ಬಗ್ಗೆ ನಮ್ಮ ಹೈಕಮಾಂಡ್‌ ಯಾವ ತೀರ್ಮಾನ ತೆಗೆದುಕೊಳ್ಳುತ್ತದೋ ಅದನ್ನ ನಾವು ಸ್ವಾಗತ ಮಾಡುತ್ತೇವೆ. ಆದಷ್ಟು ಬೇಗ ಜೆಡಿಎಸ್‌-ಬಿಜೆಪಿ ಮೈತ್ರಿಯಾದರೆ ಉತ್ತಮ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಅದನ್ನು ತೆಗೆಯುವುದಕ್ಕಾಗಿ ನಮ್ಮ ನಡುವೆ ಮೈತ್ರಿ ಅಗತ್ಯ. ಮೈತ್ರಿಯಿಂದಾಗಿ ಎರಡೂ ಪಕ್ಷಗಳಿಗೆ ಬಲ ಬರಲಿದೆ ಎಂದು ರಮೇಶ್‌ ಜಾರಕಿಹೊಳಿ ಹೇಳಿದರು.

Share Post