BengaluruPolitics

ರಾಜರಾಜೇಶ್ವರಿ ಕ್ಷೇತ್ರಕ್ಕೆ ಅನುದಾನ ಕಡಿತ; ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಪ್ರತಿಭಟನೆ

ಬೆಂಗಳೂರು; ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರಕ್ಕೆ ಬರಬೇಕಿದ್ದ ಅನುದಾನವನ್ನು ಕೈಬಿಟ್ಟು ಬೇರೆ ಕ್ಷೇತ್ರಗಳಿಗೆ ಹಂಚಿಕೆ ಮಾಡಿರುವುದಕ್ಕೆ ಶಾಸಕ ಮುನಿರತ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಶಾಸಕ ಮುನಿರತ್ನ ಅವರು ವಿಧಾನಸೌಧದ ಗಾಂಧಿ ಪ್ರತಿಭಟನೆ ಬಳಿ ಒಂಟಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಕೂಡಾ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇನ್ನು ಶಾಸಕ ಮುನಿರತ್ನ ಅವರು ಅವರ 25ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಶುರು ಮಾಡಿದರು. ಆದ್ರೆ ಪೊಲೀಸರ ಬೆಂಬಲಿಗರೆಲ್ಲರನ್ನೂ ವಶಕ್ಕೆ ಪಡೆದು ಅಲ್ಲಿಂದ ಕರೆದೊಯ್ದರು. ಹೀಗಾಗಿ ಮುನಿರತ್ನ ಒಬ್ಬರೇ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಕ್ಷೇತ್ರಕ್ಕೆ ಅನುದಾಣ ಕಡಿತಗೊಳಿಸಿ ಬೇರೆ ಕ್ಷೇತ್ರಕ್ಕೆ ಆ ಅನುದಾನ ಕೊಟ್ಟಿರುವುದು ನ್ಯಾಯವೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ಅವರನ್ನು ಪ್ರಶ್ನಿಸಿರುವ ಬೋರ್ಡ್‌ ಹಿಡಿದು ಶಾಸಕ ಮುನಿರತ್ನ ಪ್ರತಿಭಟನೆ ನಡೆಸುತ್ತಿದ್ದಾರೆ.

 

Share Post