BengaluruPolitics

ಗ್ಯಾರೆಂಟಿ ಯೋಜನೆಗಳ ಬಗ್ಗೆ ಚರ್ಚೆಗೆ ಅವಕಾಶ ಕೊಡಿ; ಬಿಜೆಪಿ ಆಗ್ರಹ

ಬೆಂಗಳೂರು; ಎರಡನೇ ದಿನದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಗಲಾಟೆ ಶುರು ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಈ ಬಿಜೆಪಿ ನಿಲುವಳಿ ಸೂಚನೆ ಮಂಡಿಸಿದ್ದು, ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹ ಮಾಡುತ್ತಿದ್ದಾರೆ.

ಆದ್ರೆ ಸ್ಪೀಕರ್‌ ಯು.ಟಿ.ಖಾದರ್‌ ಅವರು, ಈಗಾಗಲೇ ಪ್ರಶ್ನೋತ್ತರ ವೇಳೆ ಶುರುವಾಗಿದೆ. ಪ್ರಶ್ನೋತ್ತರ ಮುಗಿದ ಮೇಲೆ ನಿಮಗೆ ಅವಕಾಶ ಕೊಡುತ್ತೇವೆ ಎಂದು ಹೇಳಿದರು. ಆದ್ರೆ ಬಿಜೆಪಿ ಸದಸ್ಯರು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ, ಬಿಜೆಪಿ ಸದಸ್ಯರು ಸದನದಲ್ಲಿ ಗಲಾಟೆ ಶುರು ಮಾಡಿದರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರಶ್ನೋತ್ತರ ವೇಳೆಯ ನಂತರ ಬಿಜೆಪಿಯವರ ಎಲ್ಲಾ ಪ್ರಶ್ನೆಗಳಿಗೆ ನಾವು ಉತ್ತರ ಕೊಡುತ್ತೇವೆ. ಎಲ್ಲಾ ಚರ್ಚೆಗೂ ನಾವು ಸಿದ್ಧ ಎಂದು ಹೇಳಿದರು. ಇದರಿಂದಾಗಿ ಎರಡೂ ಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು.

Share Post