BengaluruPolitics

ಏ.11ರವರೆಗೆ ಮತದಾರರ ಹೆಸರು ಸೇರ್ಪಡೆಗೆ ಅವಕಾಶ; ರಾಜ್ಯ ಚುನಾವಣಾ ಆಯುಕ್ತ

ಬೆಂಗಳೂರು; ಇಂದು ಬೆಳಗ್ಗೆ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯುಕ್ತ ಮನೋಜ್‌ಕುಮಾರ್‌ ಮೀನಾ ಅವರು ಸುದ್ದಿಗೋಷ್ಠಿ ನಡೆಸಿದರು. ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಜೊತೆಗೆ ಜನರ ಅಕ್ರಮಗಳ ಬಗ್ಗೆ ಆಪ್‌ ಮೂಲಕ ಮಾಹಿತಿ ನೀಡಬಹುದು ಎಂದು ಹೇಳಿದರು.

ಒಬ್ಬ ಅಭ್ಯರ್ಥಿ ನಲವತ್ತು ಲಕ್ಷ ರೂಪಾಯಿ ವೆಚ್ಚ ಮಾಡಬಹುದು ಎಂದು ಹೇಳಿದ ಚುನಾವಣಾ ಆಯುಕ್ತರು, ಏಪ್ತಿಲ್‌ ೧೧ರವೆರಗೆ ಮತದಾರರ ಹೆಸರು ಸೇರ್ಪಡೆಗೆ ಅವಕಾಶವಿದೆ ಎಂದು ಹೇಳಿದರು.

Share Post