BengaluruPolitics

ಇಂದು ಸಂಜೆ ರಾಜ್ಯಕ್ಕೆ ಅಮಿತ್‌ ಶಾ; ದೇವನಹಳ್ಳಿಯಲ್ಲಿ ರೋಡ್‌ ಶೋ

ಬೆಂಗಳೂರು; ಇಂದು ರಾಜ್ಯಕ್ಕೆ ಕೇಂದ್ರ ಗೃಹಸಚಿವ ಹಾಗೂ ಬಿಜೆಪಿ ನಾಯಕ ಅಮಿತ್‌ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ವಿಶೇಷ ವಿಮಾನದ ಮೂಲಕ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಅಮಿತ್‌ ಶಾ ಆಗಮಿಸಲಿದ್ದಾರೆ. ನಂತರ ಅವರು ರಸ್ತೆ ಮಾರ್ಗವಾಗಿ ದೇವನಹಳ್ಳಿಗೆ ಭೇಟಿ ನೀಡಿ, ಅಲ್ಲಿ ನಡೆಯುವ ಬೃಹತ್‌ ರೋಡ್‌ ಶೋಗಳನ್ನು ಪಾಲ್ಗೊಳ್ಳಲಿದ್ದಾರೆ. ಅನಂತರ ಖಾಸಗಿ ಹೋಟೆಲ್‌ಗೆ ಆಗಮಿಸಲಿರುವ ಅಮಿತ್‌ ಕೆಲಕಾಲ ವಿಶ್ರಾಂತಿ ಪಡೆಯಲಿದ್ದಾರೆ.

ನಂತರ ಸಂಜೆ 6 ಗಂಟೆಯಿಂದ 9 ಗಂಟೆವರೆಗೂ ರಾಜ್ಯ ಬಿಜೆಪಿ ನಾಯಕರೊಂದಿಗೆ ಮೂರು ಪ್ರತ್ಯೇಕ ಸಭೆಗಳನ್ನು ನಡೆಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸಂಘಟನೆ, ಭಿನ್ನಮತ ಶಮನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಮಿತ್‌ ಶಾ ಅವರು ರಾಜ್ಯದ ನಾಯಕರ ಜೊತೆ ಚರ್ಚೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Share Post