BengaluruPolitics

ಕಾಂಗ್ರೆಸ್​ ಸೇರಿದ ಸಚಿವ ಆನಂದಸಿಂಗ್ ಸಹೋದರಿ ರಾಣಿ ಸಂಯುಕ್ತಾ ಸಿಂಗ್

ವಿಜಯನಗರ; ಸಚಿವ ಆನಂದ್‌ ಸಿಂಗ್‌ ಸಹೋದರಿ ರಾಣಿ ಸಂಯುಕ್ತಾ ಸಿಂಗ್‌ ಕಾಂಗ್ರೆಸ್‌ ಸೇರಿದ್ದಾರೆ. ಹೊಸಪೇಟೆ ಬಿಜೆಟಿ ಟಿಕೆಟ್‌ ಸಿಗದಿದ್ದರಿಂದ ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆಯೂ ಆಗಿದ್ದ ರಾಣಿ, ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ಇಂದು ಅವರು ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ್ದಾರೆ.

ರಾಣಿ ಸಂಯುಕ್ತಾ ಅವರುಕಳೆದ ರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದರು. ಕಾಂಗ್ರೆಸ್‌ ಸೇರುವ ಬಗ್ಗೆ ಮಾತುಕತೆ ನಡೆಸಿದ್ದರು. ಇಂದು ಅವರು ಕಾಂಗ್ರೆಸ್‌ ಸೇರಿದ್ದು, ಅಳಿಯ ಸಿದ್ದಾರ್ಥ ಸಿಂಗ್ ವಿರುದ್ದ ಪ್ರಚಾರ ನಡೆಸಲಿದ್ದಾರೆ.

Share Post