BengaluruCrime

ಆಂಧ್ರದ ಬಿಲ್ಡರ್‌ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಂಗಳೂರು; ಬಿಲ್ಡರ್‌ ಹಾಗೂ ರೌಡಿಶೀಟರ್‌ ಒಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕೆಆರ್‌ ಪುರಂ ಬಳಿಯ ಕುರುಡುಸೊಣ್ಣೇನಹಳ್ಳಿ ಬಳಿ ಈ ಘಟನೆ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಆಂಧ್ರದ ಮದನಪಲ್ಲಿ ಮೂಲದ ಶಿವಶಂಕರರೆಡ್ಡಿ ಗುಂಡಿನ ದಾಳಿಗೆ ಒಳಗಾದವರು. ಇವರು ರೌಡಿ ಶೀಟರ್‌ ಆಗಿದ್ದು, ಕೆಲ ವರ್ಷಗಳಿಂದ ರಿಯಲ್‌ ಎಸ್ಟೇಟ್‌ ಬ್ಯುಸಿನೆಸ್‌ ನಡೆಸುತ್ತಿದ್ದಾರೆ. ಶಿವಶಂಕರರೆಡ್ಡಿ ಮದನಪಲ್ಲಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ವೈಯಕ್ತಿಕ ದ್ವೇಷದಿಂದ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಶಿವಶಂಕರರೆಡ್ಡಿ ಹಾಗೂ ಕಾರು ಚಾಲಕ ಅಶೋಕ್‌ ರೆಡ್ಡಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share Post