BengaluruPolitics

ಮತ್ತೊಬ್ಬ ನಾಯಕನಿಗೆ ಕಾಂಗ್ರೆಸ್‌ ಗಾಳ; ಕಾಂಗ್ರೆಸ್‌ ಸೇರ್ತಾರಾ ಪ್ರಭಾಕರ ಕೋರೆ..?

ಬೆಳಗಾವಿ; ಕಾಂಗ್ರೆಸ್‌ ಪಕ್ಷ ಬೆಳಗಾವಿಯ ಬಿಜೆಪಿಯ ಪ್ರಮುಖ ನಾಯಕರನ್ನು ಸೆಳೆಯೋ ಪ್ರಯತ್ನ ಮಾಡುತ್ತಿದೆ. ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರ್ಪಡೆ ಬೆನ್ನಲ್ಲೇ, ಮತ್ತೊಬ್ಬ ನಾಯಕನಿಗೆ ಕಾಂಗ್ರೆಸ್‌ ಗಾಳ ಹಾಕಿದೆ ಎಂದು ಹೇಳಲಾಗುತ್ತಿದೆ. ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರನ್ನು ಕಾಂಗ್ರೆಸ್‌ಗೆ ಕರೆತರಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ನಾಯಕರ ಬಗ್ಗೆ ಅಸಮಾಧಾನ ಹೊಂದಿರುವ ಪ್ರಭಾಕರ ಕೋರೆ, ಕಾಂಗ್ರೆಸ್‌ ವಾಪಸ್ಸಾಗಲು ಮನಸ್ಸು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಭಾಕರ ಕೋರೆಯವರು ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಬೆಳಗಾವಿಯಿಂದ ಟಿಕೆಟ್‌ ಬಯಸಿದ್ದರು. ಆದ್ರೆ ಅದು ಸಿಗಲಿಲ್ಲ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆ ವಿಧಾನಪರಿಷತ್‌ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು. ಆದ್ರೆ ಅದನ್ನೂ ಕೊಡಲಿಲ್ಲ. ಇನ್ನು ರಾಜ್ಯಸಭಾ ಚುನಾವಣೆಯಲ್ಲೂ ತಮಗೆ ಬಿಟ್ಟು ಈರಣ್ಣ ಕಡಾಡಿಗೆ ಬಿಜೆಪಿ ಮಣೆ ಹಾಕಿತು. ಅಷ್ಟೇ ಅಲ್ಲ, ಬೆಳಗಾವಿ ರಾಜಕಾರಣದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಅಂತ ಪ್ರಭಾರ ಕೋರೆ ಅಸಮಾಧಾನ ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನು ತಿಳಿಸಿದ ಕಾಂಗ್ರೆಸ್‌ ನಾಯಕರು ಅವರನ್ನು ಕಾಂಗ್ರೆಸ್‌ ತರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಮಾತನಾಡಿದ್ದ ಡಿ.ಕೆ.ಶಿವಕುಮಾರ್‌, ಇನ್ನೂ 25 ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಹೇಳಿದ್ದನ್ನು ನಾವು ಇಲ್ಲಿ ನೆನಪಿಸಿಕೊಳ್ಳಬಹುದು.

Share Post