BengaluruPolitics

ಇನ್ನೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ; ಕರಂದ್ಲಾಜೆ ಹೆಸರು ಮುಂಚೂಣಿ!

ಬೆಂಗಳೂರು; ರಾಜ್ಯದಲ್ಲಿ ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಲಾಗುತ್ತದೆ ಎಂದು ಹೇಳಲಾಗುತ್ತಿದೆಯಾದರೂ ಇನ್ನೂ ಆ ಬಗ್ಗೆ ನಿರ್ಧಾರವಾಗಿರಲಿಲ್ಲ. ಆದ್ರೆ ಇದೀಗ ಇನ್ನೆರಡು ದಿನಗಳಲ್ಲಿ ನೂತನ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಶೋಭಾ ಕರಂದ್ಲಾಜೆ ಹೆಸರು ಹೆಚ್ಚು ಚಾಲ್ತಿಗೆ ಬಂದಿದೆ.

ನಾಳೆ ಅಥವಾ ನಾಡಿದ್ದೊಳಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗುತ್ತೆ ಎಂದು ಹೇಳಲಾಗುತ್ತಿದೆ. ಶೋಭಾ ಕರಂದ್ಲಾಜೆ ಹಿಂದುತ್ವದ ಫೈರ್‌ ಬ್ರಾಂಡ್‌ ಆಗಿದ್ದಾರೆ. ಜೊತೆಗೆ ಇವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಒಕ್ಕಲಿಗರನ್ನು ಸೆಳೆಯೋದಕ್ಕೂ ಸಾಧ್ಯವಾಗುತ್ತದೆ. ಇದರ ಜೊತೆಗೆ ಮಹಿಳೆಗೆ ಅಧಿಕಾರ ಕೊಟ್ಟಿದ್ದರಿಂದ ಮಹಿಳಾ ಮತದಾರರೂ ಬಿಜೆಪಿ ಕಡೆ ಒಲವು ತೋರಬಹುದು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ಗೆ ಠಕ್ಕರ್‌ ಕೊಡೋದಕ್ಕೆ ಶೋಭಾ ಕರಂದ್ಲಾಜೆ ಅವರೇ ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ಅಂದುಕೊಂಡಂತೆ ಆದರೆ ನಾಳೆ ಅಥವಾ ನಾಡಿದ್ದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗುವ ಎಲ್ಲಾ ಲಕ್ಷಣಗಳೂ ಕಂಡುಬರುತ್ತಿವೆ.

 

Share Post