Bengaluru

ಹುಬ್ಬಳ್ಳಿ ಗಲಭೆ ಪ್ರಕರಣ; ಕಾಣದ ಕೈಗಳ ಕೈವಾಡ ಇದೆ – ಆರಗ ಜ್ಞಾನೇಂದ್ರ

ಬೆಂಗಳೂರು: ಕಳೆದ ಶನಿವಾರ ರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಹಿಂದೆ ಹಲವು ಕಾಣದ ಕೈಗಳ ಕೈವಾಡ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕೆಲವರ ಪ್ರಚೋದನೆಯಿಂದ ಈ ಗಲಭೆ ನಡೆದಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. 

 

ಡಿಜಿ ಮತ್ತು ಐಜಿ ಮಾತನ್ನೇ ಪುನರುಚ್ಚರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಇದರ ಹಿಂದೆ ಹಲವು ಸಂಘಟನೆಗಳ ಕೈವಾಡ ಇರುವ ಬಗ್ಗೆ ಅನುಮಾನ ಇದೆ. ಹೀಗಾಗಿ ಇದರ ಹಿಂದೆ ಯಾರಿದ್ದಾರೆ..? ಪ್ರಚೋದನೆ ನೀಡಿದವರು ಯಾರು..? ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

 

Share Post