BengaluruPolitics

ಲಿಂಗಾಯತರೇ ಏಳು ಸಚಿವರಿಲ್ವಾ..?; ಶಾಮನೂರು ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು; ನಮ್ಮ ಸರ್ಕಾರ ಯಾವ ಸಮಯದಾಯಕ್ಕೂ ಅನ್ಯಾಯ ಮಾಡಿಲ್ಲ. ಲಿಂಗಾಯತ ಸಚಿವರೇ ಏಳು ಮಂದಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಲಿಂಗಾಯತರಿಗೆ ಸರ್ಕಾರದಲ್ಲಿ ಪ್ರಾಶಸ್ತ್ಯ ಕೊಟ್ಟಿದ್ದೇವೆ. ಇದಕ್ಕೆ ನನ್ನ ಬಳಿ ಅಂಕಿ ಅಂಶಗಳಿವೆ ಎಂದಿದ್ದಾರೆ.

ಬಿಜೆಪಿ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಅಂದು ಹೆಚ್ಡಿಕೆ ಹೇಳಿದ್ದರು. ಈಗ ಜನತಾದಳದ ಉಳಿವಿಗಾಗಿ ಬಿಜೆಪಿ ಜೊತೆ ಸೇರುತ್ತಿದ್ದೇವೆ ಅಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ವ್ಯಂಗ್ಯವಾಡಿದ್ದಾರೆ. ಜಾತ್ಯತೀತ ಪಕ್ಷ ಅಂತ ದೇಶದಲ್ಲಿ ಯಾವುದಾದರು ಪಕ್ಷ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

Share Post