BengaluruPolitics

ಅಕ್ಕಿ ಇಟ್ಟುಕೊಂಡು ಕೊಡದಿದ್ದರೆ ಇವರು ಬಡವರ ವಿರೋಧಿಗಳಲ್ಲವೇ..?; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಅಕ್ಕಿ ದಾಸ್ತಾನಿಟ್ಟುಕೊಂಡು ಕೊಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಆಫ್‌ ಕರ್ನಾಟಕ ಅಧಿಕೃತ ಟ್ವಟಿರ್‌ ಖಾತೆಯಲ್ಲಿ ಸಿಎಂ ಸರಣಿ ಟ್ವೀಟ್‌ ಮಾಡಿದ್ದಾರೆ. ಅಕ್ಕಿ ಇದ್ದರೂ ಕೊಡದ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೇ ಬೇರೇನು ಹೇಳಬೇಕು ಎಂದು ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ. 

 

ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‌ನಲ್ಲಿ ಏನಿದೆ..?

ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ನೀಡಿ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನ: ಮನವಿ ಮಾಡುವುದು ಇದ್ದೇ ಇರುತ್ತದೆ ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ.

Share Post