BengaluruPolitics

ನವರಂಗಿ ನಾರಾಯಣ ಹೇಳಿಕೆಗೆ ತಿರುಗೇಟು ಕೊಟ್ಟ ಅಶ್ವತ್ಥನಾರಾಯಣ

ಬೆಂಗಳೂರು; ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಸಚಿವ ಅಶ್ವತ್ಥನಾರಾಯಣ್‌ ಅವರನ್ನು ನವರಂಗಿ ನಾರಾಯಣ ಎಂದು ಕರೆದಿದ್ದರು. ಇದಕ್ಕೆ ಅಶ್ವತ್ಥ್‌ನಾರಾಯಣ್‌ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ನನಗೆ ಯಾರ ವಿರುದ್ಧ ವೈಯಕ್ತಿಕ ದ್ವೇಷವಿಲ್ಲ. ಪ್ರೀತಿ, ಗೌರವ ಕೊಡಲು ನಾವು ಸದಾ ಸಿದ್ಧರಿದ್ದೇವೆ. ಆದ್ರೆ ಬೆಂಗಳೂರು ನಮ್ಮ ಜೀವಾಳವಿದ್ದಂತೆ. ಬೆಂಗಳೂರಿಗೂ ಇವರಿಗೂ ಏನು ಸಂಬಂಧ ಎಂದು ಪ್ರಶ್ನೆ ಮಾಡಿದರು. ಇನ್ನು ರಾಮನಗರದ ಅಭಿವೃದ್ಧಿ ಬೆಗ್ಗಯೂ ಮಾತನಾಡಿದ ಅವರು, ರಾಮನಗರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಸ್ವಯಂ ಅಭಿವೃದ್ಧಿಯಾಗಿದೆ ಅಷ್ಟೇ ಎಂದರು.

 

Share Post