BengaluruCrimeHealth

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ; ಮೃತರ ಸಂಖ್ಯೆ 17ಕ್ಕೆ ಏರಿಕೆ!

ಬೆಂಗಳೂರು; ಕೆಲ ದಿನಗಳ ಹಿಂದೆ ಅತ್ತಿಬೆಲೆಯಲ್ಲಿ ಪಟಾಕಿ ಅನ್‌ಲೋಡ್‌ ಮಾಡುವಾಗ ಬೆಂಕಿ ದುರಂತ ಸಂಭವಿಸಿತ್ತು. ಅದರಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮತ್ತೊಬ್ಬ ಸಾವನ್ನಪ್ಪಿದ್ದಾನೆ. ಇದರಿಂದಾಗಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ತಮಿಳುನಾಡು ‌ಮೂಲದ ಯುವಕ ರಾಜೇಶ್ (19) ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾನೆ. ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತದೇಹವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ಈ ದುರಂತದಲ್ಲಿ ಪಟಾಕಿ ಗೋಡೌನ್​ ಮಾಲೀಕ ನವೀನ್, ಯುವಕ ರಾಜೇಶ್, ಬಾಡಿ ಬಿಲ್ಡರ್ ವೆಂಕಟೇಶ್​ ತೀವ್ರವಾಗಿ ಗಾಯಗೊಂಡಿದ್ದರು. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಗೋಡೌನ್‌ ಮಾಲೀಕ ನವೀನ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟಾಕಿ ಅಗ್ನಿ ಅವಘಡ ನಡೆದ ದಿನ ಸ್ಥಳದಲ್ಲೇ 14 ಮಂದಿ ಸಜೀವ ದಹನಗೊಂಡಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.

Share Post