BengaluruPolitics

ಬಿ.ಕೆ.ಹರಿಪ್ರಸಾದ್‌ ಅವರನ್ನು ಕೂಡಲೇ ಬಂಧಿಸಬೇಕು; ಮಾಜಿ ಸಿಎಂ ಡಿ.ವಿ.ಸದಾನಂದಗೌಡ

ಬೆಂಗಳೂರು; ಜನವರಿ 22 ರಂದು ನಡೆಯುವ ರಾಮಮಂದಿರ ಉದ್ಘಾಟನೆ ದಿನ ಏನಾದರೂ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಕಾರಣರಾಗುತ್ತಾರೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಎಚ್ಚರಿಕೆ ನೀಡಿದ್ದಾರೆ. ಜನವರಿ 22ರಂದು ಗೋಧ್ರಾ ರೀತಿಯ ದುರಂತ ನಡೆಯುವ ಸಾಧ್ಯತೆ ಇದೆ ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸದಾನಂದಗೌಡರು, ಬಿ.ಕೆ.ಹರಿಪ್ರಸಾದ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನವರಿ 22ರಂದು ಗೋಧ್ರಾ ರೀತಿಯ ದುರಂತ ನಡೆಯುವ ಭೀತಿ ಇದೆ. ಹೀಗಾಗಿ ಸರ್ಕಾರ ಅಂದು ಅಯೋಧ್ಯೆಗೆ ಹೋಗುವವವರಿಗೆ ಸೂಕ್ತ ರೀತಿಯ ಭದ್ರತೆ ಒದಗಿಸಬೇಕೆಂದು ಬಿ.ಕೆ.ಹರಿಪ್ರಸಾದ್‌ ಇಂದು ಬೆಳಗ್ಗೆ ಹೇಳಿದ್ದರು. ಇದಕ್ಕೆ ಬಿಜೆಪಿ ನಾಯಕರೆಲ್ಲಾ ಆಕ್ರೋಶ ಹೊರಹಾಕಿದ್ದಾರೆ. ಅದೇ ರೀತಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡರು ಕೂಡಾ ಮಾತನಾಡಿದ್ದು, ಹರಿಪ್ರಸಾದ್‌ ಅವರ ವಿರುದ್ಧ ನಾನು ಕ್ರಮಕ್ಕೆ ಆಗ್ರಹಿಸುತ್ತೇನೆ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಹೇಳಿದ್ದಾರೆ.

Share Post