BengaluruPolitics

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ; ಸಿಹಿ ತಿನ್ನಿಸಿದ ನಾಯಕರು

ಬೆಂಗಳೂರು; ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಈ ಹಿಂದಿನ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು, ಪಕ್ಷದ ಬಾವುಟ ನೀಡುವ ಮೂಲಕ ವಿಜಯೇಂದ್ರ ಅವರಿಗೆ ಅಧಿಕಾರವನ್ನು ಹಸ್ತಾಂತರ ಮಾಡಿದರು. 

ಮಾಜಿ ಸಿಎಂ ಯಡಿಯೂರಪ್ಪ, ಆರ್‌.ಅಶೋಕ್‌, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಎಲ್ಲಾ ನಾಯಕರೂ ವಿಜಯೇಂದ್ರಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು. ಇದೇ ವೇಳೆ ಮಾತನಾಡಿದ ನಿರ್ಗಮಿತ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು, ವಿಜಯೇಂದ್ರ ಅವರು ಸಮರ್ಥ ನಾಯಕರಿದ್ದಾರೆ. ಈಗಾಗಲೇ ಅವರು ರಾಜ್ಯದ ಮೂಲೆ ಮೂಲೆ ಸುತ್ತಿದ್ದಾರೆ. ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ ಅನುಭವವಿದೆ. ಹೀಗಾಗಿ, ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಸದಾನಂದಗೌಡ ಮಾತನಾಡಿ, ನಾವು ಈಗ ಏನು ಕಳೆದುಕೊಂಡಿದ್ದೇವೋ ಅದನ್ನು 2024ರ ಚುನಾವಣೆಯಲ್ಲಿ ಪಡೆದುಕೊಳ್ಳಬೇಕು. ಅದನ್ನು ವಿಜಯೇಂದ್ರ ನೇತೃತ್ವದಲ್ಲಿ ನಾವು ಮಾಡುತ್ತೇವೆ ಎಂದು ಹೇಳಿದರು.

Share Post