BengaluruPolitics

ಬಿ.ವೈ.ವಿಜಯೇಂದ್ರ ಪದಗ್ರಹಣ ಸಮಾರಂಭ; ಹಲವು ಗಣ್ಯರು ಗೈರು

ಬೆಂಗಳೂರು; ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಪದಗ್ರಹಣ ಸಮಾರಂಭ ನಡೆಯುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಆದ್ರೆ ಈ ಸಮಾರಂಭದಲ್ಲಿ ಹಲವು ನಾಯಕರು ಗೈರು ಹಾಜರಾಗಿದ್ದಾರೆ.

ಮಾಜಿ ಸಚಿವರಾದ ವಿ.ಸೋಮಣ್ಣ, ಡಾ.ಕೆ.ಸುಧಾಕರ್‌, ಎಸ್‌.ಟಿ.ಸೋಮಶೇಖರ್‌, ಅರವಿಂದ ಲಿಂಬಾವಳಿ, ಬಸನಗೌಡ ಪಾಟೀಲ್‌ ಯತ್ನಾಳ್‌, ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಗೈರು ಹಾಜರಾಗಿದ್ದಾರೆ. ಹಲವು ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಆಸೆ ಇತ್ತು. ಆದ್ರೆ ಬಿಜೆಪಿ ಹೈಕಮಾಂಡ್‌ ವಿಜಯೇಂದ್ರಗೆ ಅವಕಾಶ ನೀಡಿದೆ. ಇದರಿಂದ ಹಲವು ಅಸಮಾಧಾನಗೊಂಡಿದ್ದಾರೆ. ಅದು ಪದಗ್ರಹಣ ಕಾರ್ಯಕ್ರಮದಲ್ಲೂ ಎದ್ದು ಕಾಣುತ್ತಿದೆ.

 

Share Post