BengaluruNational

ಮತ್ತೆ ರಾಜ್ಯಕ್ಕೆ ಹಿನ್ನಡೆ; ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್‌ ನೀರು ಬಿಡಲು ಆದೇಶ

ನವದೆಹಲಿ; ಕಾವೇರಿಗಾಗಿ ರಾಜ್ಯದಲ್ಲಿ ಹೋರಾಟ ತೀವ್ರಗೊಂಡಿದೆ. ಇದರ ನಡುವೆ ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ರಾಜ್ಯಕ್ಕೆ ಹಿನ್ನೆಡೆಯಾಗಿದೆ. ರಾಜ್ಯದ ಪರಿಸ್ಥಿತಿಯನ್ನು ವಿವರಿಸಿದರೂ ಕೂಡಾ, ಕಾವೇರಿ ನೀರು ನಿಯಂತ್ರಣ ಸಮಿತಿ, ಹದಿನೈದು ದಿನಗಳ ಕಾಲ ಪ್ರತಿದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ರಾಜ್ಯ ಆದೇಶ ನೀಡಿದೆ.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಅಧಿಕಾರಿಗಳು ವರ್ಚುಯಲ್‌ ಮೂಲಕ ಪಾಲ್ಗೊಂಡಿದ್ದರು. ಕರ್ನಾಟಕ ಅಧಿಕಾರಿಗಳು ರಾಜ್ಯದ ವಾಸ್ತವದ ಪರಿಸ್ಥಿತಿಯನ್ನು ಅರ್ಥ ಮಾಡಿಸಿದರು. ಆದರೂ ತಮಿಳುನಾಡಿನ ವಾದಕ್ಕೆ ಸಮಿತಿ ಮನ್ನಣೆ ನೀಡಿದೆ. ಕಳೆದ ಬಾರಿ 5 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಸೂಚನೆ ನೀಡಲಾಗಿತ್ತು. ಆದ್ರೆ ಈ ಬಾರಿ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಸೂಚಿಸಲಾಗಿದೆ.

 

Share Post