Bengaluru

ಪರಿಷತ್‌, ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆ; ನಾಳೆ ಸಿಎಂ ದೆಹಲಿಗೆ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಿದ್ದಾರೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ನವದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಲಿದ್ದಾರೆ.

ಇತ್ತೀಚೆಗೆ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪರಿಷತ್‌ ಹಾಗೂ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿತ್ತು. ಇದನ್ನು ಪರಾಮರ್ಶಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ನಾಳೆ ಚುನಾವಣೆ ಸಮಿತಿ ಸಭೆ ನಡೆಯಲಿದೆ.

Share Post