Bengaluru

ಪರಿಷತ್‌ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ

ಬೆಂಗಳೂರು; ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಹಿನ್ನೆಲೆಯಲ್ಲಿ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಪಸಭಾಪತಿಗೆ ಅವರು ಇಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

 

ಹಲವು ದಶಕಗಳಿಂದ ಜೆಡಿಎಸ್‌ ಪಕ್ಷದಲ್ಲಿದ್ದ ಬಸವರಾಜ ಹೊರಟ್ಟಿಯವರು, ಬಿಜೆಪಿಗೆ ಸೇರುತ್ತಿದ್ದಾರೆ. ಈಗಾಗಲೇ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಿರುವ ಅವರು ಅಧಿಕೃತವಾಗಿ ಬಿಜೆಪಿ ಸೇರುವುದಷ್ಟೇ ಬಾಕಿ ಇದೆ. ಹೀಗಾಗಿ ಅವರು, ಬಿಜೆಪಿ ಸೇರುವ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಘೋಷಣೆಯಾಗಿರುವ ಪರಿಷತ್‌ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

Share Post