Bengaluru

ಬಿಬಿಎಂಪಿ ನೂತನ ಆಯುಕ್ತರಾಗಿ ತುಷಾರ್‌ ಅಧಿಕಾರ ಸ್ವೀಕಾರ

ಬೆಂಗಳೂರು: ಬಿಬಿಎಂಪಿಯ ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಇಂದು ಅಧಿಕಾರ ಸ್ವೀಕರಿಸಿದರು. ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಿಕಟ ಪೂರ್ವ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ತುಷಾರ್ ಗಿರಿನಾಥ್​​ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

   ನಿನ್ನೆಯಷ್ಟೇ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರನ್ನುರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಗೌರವ್‌ ಗುಪ್ತ ಬಿಬಿಎಂಪಿ ಆಡಳಿತಾಧಿಕಾರಿಯಾಗಿ 2020ರ ಸೆಪ್ಟೆಂಬರ್ 12ರಂದು ಅಧಿಕಾರ ಸ್ವೀಕರಿಸಿದ್ದರು. ನಂತರ 2021ರ ಏಪ್ರಿಲ್ 1ರಂದು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ನೇಮಕಗೊಂಡಿದ್ದರು.

     ಅಧಿಕಾರ ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಎದುರಿಗೆ ದೊಡ್ಡ ಸವಾಲಿದೆ. ಮುಂದೆ ಕೋವಿಡ್ 4ನೇ ಅಲೆ ಬರುತ್ತಿದೆ. ಜನರಿಗೆ ಒಳ್ಳೆಯ ಸೇವೆ ಕೊಡಬೇಕೆಂದು ಸಿದ್ಧವಾಗಿದ್ದೇವೆ ಎಂದರು.

Share Post