BengaluruPolitics

ಬೆಳಗಾವಿ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ; ಅಖಾಡಕ್ಕಿಳಿದ ಪ್ರಧಾನ್‌

ಬೆಳಗಾವಿ; ಲಕ್ಷ್ಮಣ ಸವದಿ ಬಿಜೆಪಿಯಿಂದ ಹೊರಗೆ ಹೆಜ್ಜೆ ಇಟ್ಟಿದ್ದಾರೆ. ಇನ್ನೂ ಒಂದಷ್ಟು ನಾಯಕರು ಬಿಜೆಪಿ ತೊರೆಯೋದಕ್ಕೆ ರೆಡಿಯಾಗಿದ್ದಾರೆ. ಬೆಳಗಾವಿ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಈ ಸನ್ನಿವೇಶದಿಂದ ಬಿಜೆಪಿ ನಾಯಕರಿಗೆ ಕೊಂಚ ಕಸಿವಿಸಿಯಾಗಿದೆ. ಏನಾದರೂ ಮಾಡಿ ಬಂಡಾಯ ಶಮನಕ್ಕೆ ಪ್ರಯತ್ನ ಮಾಡಲಾಗುತ್ತಿದೆ.

ಬೆಳಗಾವಿ ಬಿಜೆಪಿಯಲ್ಲಿ ಉಂಟಾದ ಬಂಡಾಯದ ಶಮನಕ್ಕೆ ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಮುಂದಾಗಿದ್ದಾರೆ. ಅವರು ಬೆಳಗಾವಿಗೆ ಆಗಮಿಸಿದ್ದು, ಬೆಳಗಾವಿ ಜಿಲ್ಲೆಯ ಘೋಷಣೆಯಾಗಿರುವ ಬಿಜೆಪಿ ಅಭ್ಯರ್ಥಿಗಳ ಸಭೆ ಕರೆದಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲಾಗುತ್ತದೆ. ಇದೇ ವೇಳೆ ಅಸಮಾಧಾನಿತ ನಾಯಕರನ್ನು ಸಮಾಧಾನ ಮಾಡುವ ಪ್ರಯತ್ನವನ್ನೂ ಮಾಡಲಾಗುತ್ತದೆ.

ಸವದಿ ನಂತರ ಅನಿಲ್‌ ಬೆನಕೆ ಹಾಗೂ ಮಹದೇವಪ್ಪ ಯಾದವಾಡ ಕೂಡಾ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದಾರೆ.

Share Post