BengaluruCrimeDistricts

ಬೆಂಗಳೂರು-ಮೈಸೂರು ರಸ್ತೆಯಲ್ಲಿ ಮತ್ತೆ ಅಪಘಾತ; ದಂಪತಿ ದುರ್ಮರಣ

ರಾಮನಗರ; ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ರಸ್ತೆ ಉದ್ಘಾಟನೆಯಾದಾಗಿನಿಂದ ಸುಮಾರು 150 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ. ನಿನ್ನೆ ಕೂಡಾ ಸರ್ಕಾರಿ ಬಸ್‌ ಅಪಘಾತಕ್ಕೀಡಾಗಿ ಕಂಡಕ್ಟರ್‌ ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಸ್ಕೂಟರ್‌ ಡಿಕ್ಕಿ ಹೊಡೆದಿದ್ದು, ದಂಪತಿ ಸಾವನ್ನಪ್ಪಿದ್ದಾರೆ.

ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್‌ ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ಬಾಪೂಜಿ ನಗರದ ಸನಾವುಲ್ಲಾ ಬೇಗ್‌ (65) ಹಾಗೂ ನೂರ್‌ ಜಹಾನ್‌ (60) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಕಾರ್ಯಕ್ರಮವೊಂದಕ್ಕೆ ಅವರು ರಾಮನಗರಕ್ಕೆ ಬಂದಿದ್ದರು. ರಾತ್ರಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ರಾತ್ರಿ ಕೆಟ್ಟು ನಿಂತಿದ್ದ ಲಾರಿಗೆ ಗೊತ್ತಾಗದೇ ಗುದ್ದಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಗೆ ರಿಫ್ಲೆಕ್ಟರ್ ಇಲ್ಲದ ಕಾರಣ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

Share Post