BengaluruCrime

ಅನೈತಿಕ ಸಂಬಂಧ ಹೊಂದಿರುವ ಅನುಮಾನ; ಪತ್ನಿ ಕತ್ತು ಸೀಳಿದ ಪತಿ

ಬೆಂಗಳೂರು; ಗಂಡನ ಅನುಮಾನಕ್ಕೆ ಪತ್ನಿ ಬಲಿಯಾಗಿದ್ದಾಳೆ.  ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿದ ಪತಿ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೆಆರ್‌ ಪುರಂ ಬಳಿಯ ಟಿ.ಸಿ.ಪಾಳ್ಯದಲ್ಲಿ ನಡೆದಿದೆ. ಈ ಸಂಬಂಧ ಕೆಆರ್‌ ಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ನ್ಯಾನ್ಸಿ ಪ್ಲೋರಾ(29) ಕೊಲೆಯಾದ ಗೃಹಿಣಿ. ಆರೋಪಿ ಪತಿ ಜಾನ್ ಸುಪ್ರಿತ್​ನನ್ನು ಬಂಧಿಸಲಾಗಿದೆ.   ಶಾಮಿಯಾನ ಮಳಿಗೆ ಇಟ್ಟುಕೊಂಡಿದ್ದ ಜಾನ್ ಸುಪ್ರಿತ್ ಎಂಟು ವರ್ಷಗಳ ಹಿಂದೆ ನ್ಯಾನ್ಸಿ ಪ್ಲೋರಾಳನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅನೈತಿಕ ಸಂಬಂಧದ ಅನುಮಾನದಲ್ಲಿ ಮನೆಯಲ್ಲಿ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

Share Post