BengaluruCrime

ದ್ವಾರ ಬಾಗಿಲಿಗೆ ಬೈಕ್‌ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

ಬೆಂಗಳೂರು; ರಾಜರಾಜೇಶ್ವರಿ ನಗರ ದ್ವಾರ ಬಾಗಿಲಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರನಿಗೆ ಗಂಭೀರ ಗಾಯಗಳಾಗಿವೆ. ನೈತಿಕ್‌ ಎಂಬಾತನೇ ಗಾಯಗೊಂಡಿರುವ ಸವಾರನಾಗಿದ್ದು, ನೈತಿಕ್‌ ಉತ್ತರ ಪ್ರದೇಶ ಮೂಲದವನು ಎಂದು ತಿಳಿದುಬಂದಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ನೈತಿಕ್‌, ರಾತ್ರಿ ಗೆಳೆಯರನ್ನು ಭೇಟಿ ವಾಒಸ್‌ ಬರುವಾಗ ಈ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬ್ಯಾಟರಾಯನಪುರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share Post