BengaluruPolitics

ಬಿಜೆಪಿ ನಾಯಕರ ಬರ ಅಧ್ಯಯನ ವಿಚಾರ; ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು; ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನದ ಹೆಸರಲ್ಲಿ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರವೇ ಬರ ಅಧ್ಯಯನ ಮಾಡಿದೆ. ಹೀಗಿದ್ಮೇಲೆ ಇವರೇನು ಅಧ್ಯಯನ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಬರ ಅಧ್ಯಯನ ಮಾಡಿದೆ. ನಾವು ಕೂಡಾ ಅಧ್ಯಯನ ಮಾಡಿದ್ದೇವೆ. ಆದ್ರೆ ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನ ಮಾಡ್ತಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ಕಳುಹಿಸಿದ್ದ ತಂಡ ಈಗಾಗಲೇ ಅಧ್ಯಯನ ಮಾಡಿ ಹೋಗಿದೆ. ಆದ್ರೆ ಇನ್ನೂ ಯಾವುದೇ ವರದಿ ಕೊಟ್ಟಿಲ್ಲ.  ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಅನುದಾನ ಕೊಡಿಸಲಿ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಬರದಿಂದ 33,700 ಕೋಟಿ ರೂಪಾಯಿ ನಷ್ಟವಾಗಿದೆ.  ನಾವು ಕೇಂದ್ರ ಸರ್ಕಾರದ ಬಳಿ 17,900 ಕೋಟಿ ರೂ. ಪರಿಹಾರ ಕೇಳಿದ್ದೇವೆ. ಅದನ್ನ ಮೊದಲು ಕೊಡಿಸಲಿ ಎಂದು ಸಿಎಂ ಆಗ್ರಹಿಸಿದರು.

Share Post