BengaluruPolitics

ಬಿಜೆಪಿ ನಾಯಕರು ಫುಲ್‌ ಅಲರ್ಟ್‌; ಬಂಡಾಯ ಶಮನಕ್ಕೆ ಸರ್ಕಸ್‌

ಬೆಂಗಳೂರು; ಲಕ್ಷ್ಮಣ ಸವದಿ ಪಕ್ಷಕ್ಕೆ ಗುಡ್‌ಬೈ ಹೇಳುತ್ತಿದ್ದಂತೆ ಬಿಜೆಪಿ ನಾಯಕರು ಫುಲ್‌ ಅಲರ್ಟ್‌ ಆಗಿದ್ದಾರೆ. ಪಕ್ಷದಲ್ಲಿನ ಬಂಡಾಯ ಶಮನ ಮಾಡಲು ಸರ್ಕಸ್‌ ನಡೆಸುತ್ತಿದ್ದಾರೆ. ಬೆಳಗಾವಿಗೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಬೆಳಗಾವಿಯಲ್ಲಿ ಅಭ್ಯರ್ಥಿಗಳು ಹಾಗೂ ಟಿಕೆಟ್‌ ವಂಚಿತರ ಜೊತೆ ಸಭೆ ನಡೆಸಿದ್ದರು. ಇದೀಗ ಚರ್ಚೆ ಬೆಂಗಳೂರಿಗೆ ಶಿಫ್ಟ್‌ ಆಗಿದೆ. ಬೆಂಗಳೂರಿನಲ್ಲಿ ಧರ್ಮೇಂದ್ರ ಪ್ರಧಾನ್‌ ಹಾಗೂ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ.

ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು, ರಾಜ್ಯ ಬಿಜೆಪಿಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಸಭೆಯಲ್ಲಿ ಭಾಗವಹಿಸಿದ್ದಾರೆ.

Share Post