BengaluruPolitics

ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಅಂದೇ ವಿಪಕ್ಷ ನಾಯಕನ ಆಯ್ಕೆ ?

ಬೆಂಗಳೂರು; ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿಗದಿ ಮಾಡಲಾಗಿದೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆದೇ ನಡೆಯುತ್ತೆ. ಮುಂದೂಡಿಕೆಯಂತಹ ಬೆಳವಣಿಗೆ ಆಗಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನಾನು ಕರೆ ಮಾಡಿ ಮಾತನಾಡಿದ್ದೇವೆ. ಶುಕ್ರವಾರ ಯಾರು ಯಾರು ವೀಕ್ಷಕರು ಬರಲಿದ್ದಾರೆ ಎಂಬುದನ್ನು ಇವತ್ತೇ ತಿಳಿಸಲಿದ್ದಾರೆ. ವೀಕ್ಷಕರು ಗುರುವಾರ ಬರುತ್ತಾರಾ ಅಥವಾ ಶುಕ್ರವಾರವೇ ಬರುತ್ತಾರಾ ಎಂಬುದು ಇನ್ನೂ ಗೊತ್ತಿಲ್ಲ. ಇವತ್ತು ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

 

Share Post