Bengaluru

ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಡಿ.ಕೆ.ಸುರೇಶ್‌ ಮನೆಗೆ ಮುತ್ತಿಗೆ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ವೈಯಾಲಿಕಾವಲ್‍ನಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ಮನೆಗೆ ಮುತ್ತಿಗೆ ಹಾಕಲಾಯಿತು. ರಾಮನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಎದುರಲ್ಲೇ ಸಂಸದ ಡಿ.ಕೆ.ಸುರೇಶ್  ಸಚಿವ ಡಾ.ಅಶ್ವತ್ಥನಾರಾಯಣ ಮೇಲೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.  ಸಚಿವರ ಮೇಲೆ ಹಲ್ಲೆಗೆ ಯತ್ನಿಸಿ, ಮೈಕ್ ಕಸಿದು, ತಳ್ಳಾಟ ನಡೆಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಅಲ್ಲದೆ, ಅಸಭ್ಯ ಹಾಗೂ ಗೂಂಡಾ ವರ್ತನೆ ತೋರಿದ್ದಾರೆ. ಇದನ್ನು ಖಂಡಿಸಿದ ಕಾರ್ಯಕರ್ತರು ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಮನೆಗೆ ಮುತ್ತಿಗೆ ಹಾಕಿದರು. ಮನೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

 

Share Post