BengaluruPolitics

ಸಚಿವ ಶಿವಾನಂದ ಪಾಟೀಲ್‌ ವಿರುದ್ಧ ಬಿಜೆಪಿ ಕಿಡಿ; ರಾಜೀನಾಮೆ ಕೊಡಿ ಎಂದ ವಿಜಯೇಂದ್ರ

ಬೆಂಗಳೂರು; ರೈತರು ಬರಗಾಲಕ್ಕಾಗಿ ಕಾಯುತ್ತಿರುತ್ತಾರೆ. ಸಂಕಷ್ಟದ ಸಮಯದಲ್ಲಿ ಸಾಲ ಮನ್ನಾ ಸಾಧ್ಯವಿಲ್ಲ ಎಂದಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ವಿಪಕ್ಷಗಳು ತಿರುಗಿಬಿದ್ದಿವೆ. ರೈತರನ್ನು ಅಪಮಾನ ಮಾಡುತ್ತಿದ್ದೀರಾ ಎಂದು ಬಿಜೆಪಿಯ ಹಲವು ನಾಯಕರು ಪ್ರಶ್ನೆ ಮಾಡಿದ್ದಾರೆ.

ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲ್ ಅವರು ರೈತರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು ಸಚಿವ ಶಿವಾನಂದ್​ ಪಾಟೀಲ್​ಗೆ ಬುದ್ಧಿ ಹೇಳಬೇಕು. ತಿದ್ದಿಕೊಳ್ಳುವ ಯೋಗ್ಯತೆ ಇಲ್ಲದಿದ್ದರೆ ಸಚಿವರು ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದರು.

ಶಿವಾನಂದ್​ ಪಾಟೀಲ್​ ಹಿಂದೆ ಕೂಡಾ ದುರಂಕಾರದ ಹೇಳಿಕೆ ಕೊಟ್ಟಿದ್ದರು. ಮತ್ತೆ​ ಅದೇ ತಪ್ಪನ್ನ ಮಾಡಿದ್ದಾರೆ. ರಾಜ್ಯ ಸರ್ಕಾರ ರೈತರಿಗೆ ಅವಮಾನ ಮಾಡ್ತಿದೆ ಎಂದು ವಿಜಯೇಂದ್ರ ಕಿಡಿ ಕಾರಿದರು.

 

Share Post