BengaluruPolitics

ಇಂದೇ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಬೆಂಗಳೂರು; ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ತಿಂಗಳಾದರೂ ಬಿಜೆಪಿಯವರು ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಇದೇ ವಿಚಾರವನ್ನು ಮುಂದಿಟ್ಟು ಆಡಳಿತ ಪಕ್ಷದವರು ಲೇವಡಿ ಮಾಡುತ್ತಿದ್ದಾರೆ. ಇದರ ಮಧ್ಯೆ ಸೂಕ್ತ ಅಭ್ಯರ್ಥಿಗಾಗಿ ಹುಡುಕುತ್ತಿದ್ದ ಬಿಜೆಪಿ ಇಂದು ವಿಪಕ್ಷ ನಾಯಕನ ಹೆಸರನ್ನು ಫೈನಲ್‌ ಮಾಡುತ್ತದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.

ಕಲಾಪಕ್ಕೆ ಹಾಜರಾಗುವುದಕ್ಕೂ ಮೊದಲು ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವೀಕ್ಷಕರು ಶಾಸಕರು ಹಾಗೂ  ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿಯಲ್ಲಿ ಇಂದು ಈ ಬಗ್ಗೆ ಮಾತುಕತೆ ನಡೆಯಲಿದೆ. ಇಂದೇ ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Share Post