BengaluruCrimePolitics

ಜೆಡಿಎಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ

ಬೆಂಗಳೂರು; ಮತದಾನದ ದಿನ ಹತ್ತಿರಕ್ಕೆ ಬರುತ್ತಿದ್ದಂತೆ ಅಲ್ಲಲ್ಲಿ ಜಗಳ ಗಲಾಟೆಗಳು ಜಾಸ್ತಿಯಾಗುತ್ತಿವೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬೈಕ್ ರ‍್ಯಾಲಿ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಜೆಡಿಎಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಜೆಡಿಎಸ್‌ ಕಾರ್ಯಕರ್ತನೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಬೈಕ್ ರ‍್ಯಾಲಿ ನಡೆಸುವಾಗ ಎರಡೂ ಪಕ್ಷಗಳ ಕಾರ್ಯಕರ್ತರು ಮುಖಾಮುಖಿ ಆಗಿದ್ದು, ಈ ವೇಳೆ ಮಾತಿನ ಚಕಮಕಿ ನಡೆದಿದೆ. ಇದೇ ವೇಳೆ ರೊಚ್ಚಿಗೆದ್ದ ಕೆಲವರು ನೂಕಾಟ ತಳ್ಳಾಟ ಮಾಡಿದ್ದು, ಹಲ್ಲೆ ಕೂಡಾ ನಡೆದಿದೆ.

ಇತ್ತ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕ್ಷೇತ್ರದ ಸಿರಿಗೆರೆ ಗ್ರಾಮದಲ್ಲೂ ಮಾರಾಮಾರಿ ನಡೆದಿದೆ. ಬಿಜೆಪಿ ರೋಡ್‌ ಶೋ ವೇಳೆ ಬಾವುಟ ತಿರುಗಿಸುವಾಗ ವ್ಯಕ್ತಿಯೊಬ್ಬರಿಗೆ ಅದು ತಾಗಿದೆ. ಇದರಿಂದ ಗಲಾಟೆ ನಡೆದಿದ್ದು, ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

Share Post