BengaluruPolitics

ಮಾರ್ಚ್‌ 1ರಿಂದ ಬಿಜೆಪಿ ರಥಯಾತ್ರೆ; ಮಹದೇಶ್ವರ ಬೆಟ್ಟದಲ್ಲಿ ಚಾಲನೆ

ಬೆಂಗಳೂರು; ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದೆ. ಹೀಗಾಗಿ ಎಲ್ಲಾ ಪಕ್ಷಗಳ ನಾಯಕರು ನಿರಂತರವಾಗಿ ಯಾತ್ರೆಗಳನ್ನು ನಡೆಸುತ್ತಿದ್ದಾರೆ. ಇದೀಗ ಬಿಜೆಪಿ ರಾಜ್ಯದ ಮತದಾರರನ್ನು ಸೆಳೆಯಲು ರಥಯಾತ್ರೆ ಆರಂಭಿಸುತ್ತಿದೆ. ಮಾರ್ಚ್‌ 1 ರಿಂದ ರಾಜ್ಯದಲ್ಲಿ ಬಿಜೆಪಿ ರಥ ಯಾತ್ರೆ ಶುರುವಾಗಲಿದೆ.

ಈ ಬಗ್ಗೆ ರಥಯಾತ್ರೆ ಸಂಚಾಲಕ ಸಿಸಿ ಪಾಟೀಲ್‌ ಅವರು ಮಾಹಿತಿ ನೀಡಿದ್ದಾರೆ. ನಾಲ್ಕು ತಂಡಗಳಾಗಿದೆ ನಾವು ರಥಯಾತ್ರೆ ಮಾಡುತ್ತೇವೆ. ಮಾರ್ಚ್ 1ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಎರಡನೇ ಯಾತ್ರೆ ಬೆಳಗಾವಿ ಜಿಲ್ಲೆಯ ಖಾನಾಪುರದಿಂದ ಶುರುವಾಗಲಿದ್ದು, ಅದಕ್ಕೆ ರಾಜನಾಥ್‌ ಸಿಂಗ್‌, 3 ಮತ್ತು 4ನೇ ರಥಯಾತ್ರೆಗಳಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಉದ್ಘಾಟನೆ ಚಾಲನೆ ನೀಡಲಿದ್ದಾರೆ.

Share Post