Bengaluru

ಬೆಂಗಳೂರಲ್ಲಿ ನಿಲ್ಲದ ಬಸ್‌ ಬೆಂಕಿ ದುರ್ಘಟನೆ; ಇಂದು ಮತ್ತೊಂದು ಬಸ್‌ಗೆ ಬೆಂಕಿ

ಬೆಂಗಳೂರು: ಬಿಎಂಟಿಸಿ ಬಸ್‌ಗಳಲ್ಲಿ ಇತ್ತೀಚೆಗೆ ಬೆಂಕಿ ಕಾಣಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇವತ್ತೂ ಕೂಡಾ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.  ಶೇಷಾದ್ರಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

2014 ರಲ್ಲಿ 186 ಅಶೋಕ್ ಲೇಲ್ಯಾಂಡ್ ಬಸ್​ಗಳನ್ನ ಖರೀದಿ ಮಾಡಲಾಗಿತ್ತು. ಇತ್ತೀಚಿಗೆ ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದ ಬಳಿ ಎರಡು ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ದೂರು ನೀಡಿದ್ದರು. ಎಂಜಿನಿಯರ್‌ಗಳು ಬಂದು ಎಲ್ಲ ಬಸ್‌ಗಳನ್ನು ತಪಾಸಣೆ ಮಾಡಿ ಸಮಸ್ಯೆ ಬಗಹರಿಸಿದ್ದರು. ಬಳಿಕವೇ ಬಸ್‌ಗಳನ್ನು ಮತ್ತೆ ರೋಡ್‌ಗೆ ಇಳಿಸಲಾಗಿತ್ತು. ಆದರೆ, ಇದೀಗ ಮತ್ತೊಂದು ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಆತಂಕದ ಮನೆ ಮಾಡಿದೆ.

Share Post