BengaluruPolitics

ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಇಬ್ಬರಿಗೂ ಅವಕಾಶ ಸಿಗಬೇಕು; ಕೃಷ್ಣ ಬೈರೇಗೌಡ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಿದ್ದಾರೆ. ಇಬ್ಬರಿಗೂ ಅವಕಾಶ ಸಿಗಬೇಕು ಅನ್ನೋದು ಎಲ್ಲರ ಅಭಿಪ್ರಾಯ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಇಬ್ಬರೂ ನಾಯಕರನ್ನು ಹಾಡಿಹೊಗಳಿದ್ದಾರೆ.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅತ್ಯುತ್ತಮ ಆಡಳಿತ ನೀಡಿದ್ದರು. ಜೊತೆಗೆ ಅವರು ರಾಜ್ಯದಲ್ಲಿ ಅಪಾರ ಜನಮನ್ನಣೆ ಪಡೆದುಕೊಂಡಿದ್ದಾರೆ. ಬಹುತೇಕ ಸಮೀಕ್ಷೆಗಳಲ್ಲೂ ಸಿದ್ದರಾಮಯ್ಯ ಅವರ ಹೆಸರೇ ಮುಂಚೂಣಿಯಲ್ಲಿತ್ತು. ಇನ್ನು ಡಿ.ಕೆ.ಶಿವಕುಮಾರ್‌ ಅವರು ಸಮರ್ಥವಾಗಿ ಪಕ್ಷವನ್ನು ಸಂಘಟನೆ ಮಾಡಿದ್ದಾರೆ. ಕಷ್ಟ ಹಾಗೂ ಅತ್ಯಂತ ಕ್ಲಿಷ್ಟಕರವಾಗಿ ಪರಿಸ್ಥಿತಿಯಲ್ಲೂ ಡಿಕೆಶಿಯವರು ಪಕ್ಷದ ಕೆಲಸ ಮಾಡಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಇಬ್ಬರೂ ಸಿಎಂ ಸ್ಥಾನಕ್ಕೆ ಅರ್ಹರು. ಇಬ್ಬರಿಗೂ ಅವಕಾಶ ಸಿಗಬೇಕು ಅನ್ನೋದು ಜನರು, ಕಾರ್ಯಕರ್ತರ ಅಭಿಪ್ರಾಯವಾಗಿದೆ ಎಂದು ಕೃಷ್ಣ ಭಯರೇಗೌಡ ಹೇಳಿದ್ದಾರೆ.

Share Post