BengaluruPolitics

ಸಿದ್ದರಾಮಯ್ಯ, ಡಿಕೆಶಿ ಇಬ್ಬರೂ ಜನರ ಮನಸ್ಸಿನಲ್ಲಿಲ್ಲ; ಬೊಮ್ಮಾಯಿ

ಬೆಂಗಳೂರು; ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗೋಕೆ ಆಶೀರ್ವಾದ ಮಾಡಿ ಎಂದು ಹೇಳುತ್ತಾರೆ. ಇತ್ತ ಸಿದ್ದರಾಮಯ್ಯ ಅವರು ನಾನೇ ಸಿದ್ದ ಎಂದು ಹೇಳುತ್ತಿದ್ದಾರೆ. ಆದ್ರೆ ಜನರ ಮನಸ್ಸಿನಲ್ಲಿ ಇಬ್ಬರು ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಅಭ್ಯರ್ಥಿ ವಿಚಾರವಾಗಿ ಸಿದ್ದರಾಮಯ್ಯ ಅವರ ಹೇಳೀಕೆಯಲ್ಲಿ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯನ್ನು ಆಯ್ಕೆ ಮಾಡೋದು ಮತದಾರರು ಮತ್ತು ಶಾಸಕರು. ಆದ್ರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಈಗಲೇ ಸಿಎಂ ಆಗಿಬಿಟ್ಟಿದ್ದೇವೆ ಎಂಬಂತೆ ಅಂದುಕೊಂಡಿದ್ದಾರೆ. ಆದ್ರೆ ಜನರ ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲವೇ ಇಲ್ಲ ಎಂದು ಹೇಳಿದ್ದಾರೆ.

Share Post