Bengaluru

ಮಕ್ಕಳ ತಲೆಗೆ ವಿಷ ತುಂಬುವ ಪಠ್ಯಕ್ಕೆ ಬ್ರೇಕ್‌; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಶಾಲಾ ಮಕ್ಕಳ ತಲೆಗೆ ವಿಷ ತುಂಬುವಂತ ಪಠ್ಯ ಹಾಗೂ ಪಾಠಗಳಿಗೆ ಬ್ರೇಕ್‌ ಹಾಕಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಶಾಲೆಗಳಲ್ಲಿ ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು 40ಕ್ಕೂ ಹೆಚ್ಚು ಸಾಹಿತಿಗಳು, ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕನ್ನಡ ನಾಡಿನ ಸೌಹಾರ್ದತೆ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ಮಾಡಲು ನಮ್ಮ ಸರ್ಕಾರ ಬದ್ಧ ಎಂದು ಹೇಳಿದರು.

Share Post