BengaluruSports

ಬೆಂಗಳೂರು ಕಂಬಳಕ್ಕೆ ಬ್ರಿಜ್‌ ಭೂಷಣ್‌ ಆಮಂತ್ರಣ ರದ್ದು; ಕಾರಣ ಏನು ಗೊತ್ತಾ..?

ಬೆಂಗಳೂರು; ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್‌ 25ರಿಂದ 26ರವರೆಗೆ ಕಂಬಳ ಏರ್ಪಡಿಸಲಾಗಿದೆ. ಇದಕ್ಕೆ ಮುಖ್ಯ ಅತಿಥಿಯಾಗಿ ಭಾರತ ಕುಸ್ತಿ ಫೆಡರೇಷನ್‌ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ಗೆ ಆಹ್ವಾನ ನೀಡಲಾಗಿತ್ತು. ಆದ್ರೆ ಇದಕ್ಕೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಬ್ರಿಜ್‌ ಭೂಷಣ್‌ ಆಮಂತ್ರಣವನ್ನು ರದ್ದು ಮಾಡಲಾಗಿದೆ.

ಕಾರ್ಯಕ್ರಮದ ಆಯೋಜಕರು ಈಗಾಗಲೇ ಆಹ್ವಾನ ಪತ್ರಿಕೆ ಮುದ್ರಿಸಲಾಗಿದೆ. ಆದ್ರೆ, ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವುದರಿಂದ ಬ್ರಿಜ್‌ ಭೂಷಣ್‌ ಕರೆಸುತ್ತಿರುವುದು ತಪ್ಪು ರಂದು ಹಲವರು ಆಕ್ರೋಶ ಹೊರಹಾಕಿದ್ದರು. ಬ್ರಿಜ್‌ ಭೂಷಣ್‌ ಕಂಬಳ ಕಾರ್ಯಕ್ರಮಕ್ಕೆ ಬರಬಾರದು ಎಂದು ಆಗ್ರಹಿಸಲಾಯಿತು. ಈ ಹಿನ್ನಲೆಯಲ್ಲಿ ಅವರ ಅವರ ಆಹ್ವಾನವನ್ನು ವಾಪಸ್‌ ಪಡೆಯಲಾಗಿದೆ.

25ರಂದು ನಡೆಯುವ ಕುಸ್ತಿಪಟುಗಳ ಅಭಿನಂದನಾ ಸಮಾರಂಭಕ್ಕೆ ಬ್ರಿಜ್‌ಭೂಷಣ್​ರನ್ನು ಆಹ್ವಾನಿಸಲಾಗಿತ್ತು. ಈಗ ಅವರಿಗೆ ನೀಡಿದ್ದ ಆಹ್ವಾನವನ್ನು ಕಂಬಳ ಆಯೋಜಕರು ರದ್ದುಗೊಳಿಸಿದ್ದಾರೆ.

Share Post