BengaluruPolitics

ಬಿರುಸಿನಿಂದ ನಡೆಯುತ್ತಿದೆ ಮತದಾನ; ಬೆಳಗ್ಗೆಯೇ ನಾಯಕರ ಮತದಾನ

ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಬಿರುಸಿನಿಂದ ಸಾಗಿದೆ. ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಜನರು ಸಾಲುಗಟ್ಟಿ ನಿಂತು ಮತದಾನ ಮಾಡುತ್ತಿದ್ದಾರೆ.

ಇನ್ನು ನಾಯಕರು ಕೂಡಾ ಬೆಳಗ್ಗೆಯೇ ಮತದಾನ ಮಾಡಿದ್ದಾರೆ. ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕಟುಂಬ ಸಮೇತ ಮತದಾನ ಮಾಡಿದ್ದಾರೆ. ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್‌, ಮಲ್ಲೇಶ್ವರಂನಲ್ಲಿ ಸಚಿವ ಅಶ್ವತ್ಥನಾರಾಯಣ ಮತದಾನ ಮಾಡಿದ್ದಾರೆ.

ಇನ್ನು ಶಿಕಾರಿಪುರದಲ್ಲಿ ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, ಈ ಬಾರಿಯೂ ಬಿಜೆಪಿ ಬಹುಮತ ಪಡೆಯಲಿದೆ. ನಾವೇ ಅಧಿಕಾರ ಹಿಡಿಯೋದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share Post