Bengaluru

ರೆಡ್ಡಿ ಮೊಮ್ಮಗಳ ನಾಮಕರಣ ಸಮಾರಂಭದಲ್ಲಿ ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು; ಮಾಜಿ ಸಚಿವ ಜನಾರ್ದನ ರೆಡ್ಡಿಯವರ ದ್ವಿತೀಯ ಮೊಮ್ಮಗಳ ನಾಮಕರಣ ನಡೆಯಿತು. ಇದರಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಿದ್ದರು. ಚುನಾವಣೆ ಸಮಯದಲ್ಲಿ ರೆಡ್ಡಿಯವರ ಕುಟುಂಬದ ಸಮಾರಂಭದಲ್ಲಿ ಬಿಎಸ್‌ವೈ ಪಾಲ್ಗೊಂಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಅದ್ದೂರಿ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ ಮೊಮ್ಮಗಳಿಗೆ ಬಿ.ಎಸ್‌.ಯಡಿಯೂರಪ್ಪ ಆಶೀರ್ವಾದ ಮಾಡಿದರು. ಇದೇ ವೇಳೆ ಜನಾರ್ದನರೆಡ್ಡಿಯವರು ಯಡಿಯೂರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದರು. ಸೋಮಶೇಖರ್ ರೆಡ್ಡಿ, ಕರುಣಾಕರ್ ರೆಡ್ಡಿ ಹಾಜರಿದ್ದರು.

Share Post