Bengaluru

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ ಪ್ರಕರಣ; ತನಿಖೆ ಚುರುಕುಗೊಳಿಸಿದ ಪೊಲೀಸರು

ಬೆಂಗಳೂರು: ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೌಗ್ರೌಂಡ್ಸ್‌ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಸೌಂದರ್ಯ ವಾಸವಿದ್ದ ವಸಂತನಗರದ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಸೌಂದರ್ಯ ಬಳಸುತ್ತಿದ್ದ ಫೋನ್‌ ವಶಪಡಿಸಿಕೊಳ್ಳಲಾಗಿದ್ದು, ಅದ್ರಲ್ಲಿ ಆತ್ಮಹತ್ಯೆಗೆ ಕಾರಣ ಸಿಗಹಬಹುದಾ ಎಂದು ಹುಡುಕಾಟ ನಡೆಸಿದ್ದಾರೆ.

ಇನ್ನು ಇಂದು ಸೌಂದರ್ಯ ವಾಸವಿದ್ದ ಫ್ಲ್ಯಾಟ್‌ನಲ್ಲಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ. ಸ್ಥಳ ಮಹಜರು ಮಾಡಲಿದ್ದಾರೆ. ಈಗಾಗಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದ್ರೆ, ಸೌಂದರ್ಯ ಪತಿ ನೀರಜ್‌ ಇನ್ನೂ ಸ್ಥಳಕ್ಕೆ ಬಂದಿಲ್ಲ. ನೀರಜ್‌ ಬಂದ ಮೇಲೆ ಅವರ ಸಮ್ಮುಖದಲ್ಲಿ ಮಹಜರು ನಡೆಸಲಾಗುತ್ತದೆ.
ಇನ್ನೊಂದೆಡೆ ಅಬ್ಬಿಗೆರೆಯಲ್ಲಿ ಸೌಂದರ್ಯ ಅವರ ಸಮಾಧಿ ಬಳಿ ಹಾಲು ತಪ್ಪು ಕಾರ್ಯ ನಡೆಸಲಾಯಿತು. ಲಿಂಗಾಯತ ಸಂಪ್ರದಾಯದಂತೆ ಹಾಲು ತುಪ್ಪ ಕಾರ್ಯದಲ್ಲಿ ನಡೆಸಲಾಯಿತು. ಇದರಲ್ಲಿ ಬಿಎಸ್‌ವೈ ಪುತ್ರ ವಿಜಯೇಂದ್ರ ಭಾಗವಹಿಸಿದ್ದರು.

Share Post