Bengaluru

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ; ಸಂಜೆ ತಿರುಪತಿಗೆ ತೆರಳಲಿರುವ ಬಿಎಸ್‌ವೈ

ಬೆಂಗಳೂರು; ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿದ್ದರಿಂದ ಖುಷಿಯಾಗಿರುವ ಮಾಜಿ ಸಿಎಂ ಯಡಿಯೂರಪ್ಪ ಇಂದು ತಿರುಪತಿಗೆ ತೆರಳಲಿದ್ದಾರೆ. ಸಂಜೆ ಅವರು ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತಿರುಪತಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ಬೆಳಗ್ಗೆ ಅವರು ತಿಮ್ಮಪ್ಪನ ದರ್ಶನ ಪಡೆಯಲಿದ್ದು, ನಾಳೆ ಬೆಳಗ್ಗೆ ೧೧ ಗಂಟೆಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ. ಯಡಿಯೂರಪ್ಪ ಅವರ ಜೊತೆಯಲ್ಲಿ ಸಿಎಂ ಬೊಮ್ಮಾಯಿ, ಸಚಿವ ಆರ್‌.ಅಶೋಕ್‌, ಶಾಸಕ ವಿಶ್ವನಾಥ್‌, ಕಳಕಪ್ಪ ಬಂಡಿ ಕೂಡಾ ತಿರುಪತಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

Share Post