BengaluruNational

ಸಚಿವ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ; ಹೈಕಮಾಂಡ್‌ ಹೇಳಿದ್ದೇನು..?

ಬೆಂಗಳೂರು; ರಾಜ್ಯ ವಿಧಾನಸಭಾ ಚುನಾವಣೆಗೆ ಐದಾರು ತಿಂಗಳೂ ಬಾಕಿ ಇರುವ ನಡುವೆಯೂ ಸಚಿವ ಸಂಪುಟ ವಿಸ್ತರಣೆಯ ವಿಶ್ವಾಸ ಹೊಂದಿದ್ದ ಸಚಿವಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.

ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಾಯಿ ನಿನ್ನೆಯೇ ದೆಹಲಿಗೆ ತೆರಳಿದ್ದರು.

ಈ ವೇಳೆ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ ಎನ್ನಲಾಗುತ್ತಿದೆ.  ಡಿಸೆಂಬರ್ 30ಕ್ಕೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದು ಆ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುವಾಗಿ ತಿಳಿಸಿದ್ದು ಮೂರ್ನಾಲ್ಕು ದಿನಗಳ ಕಾಲ ಸುಮ್ಮನಿರಲು ಸಿಎಂ ಬೊಮ್ಮಾಯಿಗೆ ಸೂಚನೆ ನೀಡಲಾಗಿದೆ ಎನ್ನಲಾಗುತ್ತಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ಭೇಟಿ ನೀಡಿದ್ಧ ಸಿಎಂ ಬೊಮ್ಮಾಯಿ 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದು,  ಚುನಾವಣೇ ವೇಳೆ ಆತುರ ಮಾಡದಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

Share Post