BengaluruPolitics

ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಫಿಕ್ಸ್‌

ಶಿವಮೊಗ್ಗ; ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆಯಾಗೋದಿಲ್ಲ ಎಂದು ಎಲ್ಲರೂ ಮಾತನಾಡುತ್ತಿದ್ದರು. ಆದ್ರೆ ಸಂಪುಟ ವಿಸ್ತರಣೆಯಾಗುವ ಲಕ್ಷಣ ಕಂಡುಬರ್ತಾ ಇದೆ. ಮಾಜಿ ಸಿಎಂ ಯಡಿಯೂರಪ್ಪ ಅವರೇ ಈ ಬಗ್ಗೆ ತಿಳಿಸಿದ್ದಾರೆ. ಎರಡು ಮೂರು ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಅವತು ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.

ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎಂಬುದನ್ನು ಮೋದಿ ಹಾಗೂ ಕೇಂದ್ರದ ನಾಯಕರು ತೀರ್ಮಾನ ಮಾಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇದರ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗುತ್ತೆ ಎಂದಿದ್ದಾರೆ.

ಈಶ್ವರಪ್ಪ, ರಮೇಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share Post