BengaluruPolitics

ಕ್ಯಾಬಿನೆಟ್‌ ಮೀಟಿಂಗ್‌; ಐದೂ ಭರವಸೆ ಜಾರಿ

ಬೆಂಗಳೂರು; ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶಿವಕುಮಾರ್‌ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇವರ ಜೊತೆ ಎಂಟು ಸಚಿವರು ಪ್ರಮಾಣ ಸ್ವೀಕಾರ ಮಾಡಿದ್ದಾರೆ. ಇದೀಗ ಕೆಲವೇ ಕ್ಷಣಗಳಲ್ಲಿ ಸಂಪುಟ ಸಭೆ ನಡೆಯಲಿದೆ.

ಮೊದಲ ಸಂಪುಟ ಸಭೆಯಲ್ಲೇ ಐದೂ ಗ್ಯಾರೆಂಟಿಗಳಿಗೆ ಒಪ್ಪಿಗೆ ಪಡೆಯಲಾಗುತ್ತದೆ. ಅನಂತರ, ಸಿದ್ದರಾಮಯ್ಯ ಅವರೇ ಸುದ್ದಿಗೋಷ್ಠಿ ಮಾಡಿ, ಈ ಘೋಷಣೆಗಳನ್ನು ಮಾಡಲಿದ್ದಾರೆ.

ಐದು ಭರವಸೆಗಳು ಏನು..?

೧.ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ

೨.ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತ

೩.ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ

೪.ಬಿಪಿಎಲ್‌ ಕಾರ್ಡ್‌ದಾರರಿಗೆ ಪ್ರತಿಯೊಬ್ಬರಿಗೂ ತಿಂಗಳಿಗೆ ಹತ್ತು ಕೆಜಿ ಉಚಿತ ಅಕ್ಕಿ

೫.ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ, ನಿರುದ್ಯೋಗಿ ಡಿಪ್ಲೋಮಾದಾರರಿಗೆ 1.5 ಸಾವಿರ ರೂಪಾಯಿ

Share Post