BengaluruPolitics

ವಿಧಾನಸೌಧದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌; ಇಂದಿನಿಂದಲೇ ಗ್ಯಾರೆಂಟಿಗಳ ಜಾರಿ?

ಬೆಂಗಳೂರು; ಇವತ್ತು ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಐದೂ ಗ್ಯಾರೆಂಟಿಗಳಿಗೆ ಅಂಕಿತ ಬೀಳುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಇಂದಿನ ಸಭೆ ಕುತೂಹಲಕ್ಕೆ ಕಾರಣವಾಗಿದೆ. ಕ್ಯಾಬಿನೆಟ್‌ ಮೀಟಿಂಗ್‌ಗೂ ಮೊದಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಬಿಸಿಬಿಸಿ ಚರ್ಚೆ ನಡೆಸಿದ್ದಾರೆ. ಕ್ಯಾಬಿನೆಟ್‌ ಮೀಟಿಂಗ್‌ ಬಳಿಕ ಗ್ಯಾರೆಂಟಿಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಇನ್ನೊಂದೆಡೆ ಇಂದು ಮೂರು ಗ್ಯಾರೆಂಟಿಗಳನ್ನು ಘೋಷಣೆ ಮಾಡಿ, ಉಳಿದ ಎರಡು ಗ್ಯಾರೆಂಟಿಗಳನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

Share Post