BengaluruCrime

ಕಾರಿನ ಟೈಯರ್‌ ಸ್ಫೋಟ; ಅಪಘಾತದಲ್ಲಿ ಮೂವರ ದುರ್ಮರಣ

ಬೆಂಗಳೂರು; ಬೆಂಗಳೂರಿನ ಅಂಚೆಪಾಳ್ಯದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರಿನ ಟೈಯರ್‌ ಸ್ಫೋಟವಾಗಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಬೆಂಗಳೂರು ಉತ್ತರ ತಾಲ್ಲೂಕು ಅಂಚೆಪಾಳ್ಯ ಬಳಿ ಈ ದುರ್ಘಟನೆ ನಡೆದಿದ್ದು, ಅಗಸ್ಟಿನ್‌, ದಾರಾರೆಡ್ಡಿ ಎಂಬುವವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಮೃತನ ಗುರುತು ಪತ್ತೆಯಾಗಿಲ್ಲ.

ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಸಂಪೂರ್ಣ ನಜ್ಜಗುಜ್ಜಾಗಿದೆ.

 

Share Post