BengaluruCrime

ಡಾ.ಚಂದ್ರಶೇಖರ ಕಂಬಾರರ ಹೆಸರಲ್ಲಿ ವಂಚನೆ; ದೂರು ದಾಖಲು

ಬೆಂಗಳೂರು; ಕಾದಂಬರಿಕಾರ, ನಾಟಕಕಾರ ಡಾ.ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಕಂಬಾರರ ಹೆಸರಿನಲ್ಲಿ ವಾಟ್ಸ್​ ಆ್ಯಪ್ ಸಂದೇಶ ಕಳಿಸುತ್ತಿರುವ ಅಪರಿಚಿತರು ಧನಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನನ್ನ ಹೆಸರಿನಲ್ಲಿ ಬೇರೆ ಬೇರೆ ವ್ಯಕ್ತಿಗಳಿಗೆ ವಾಟ್ಸ್​ ಆ್ಯಪ್ ಸಂದೇಶ ಕಳಿಸುತ್ತಿರುವ ಕಿಡಿಗೇಡಿಗಳು, ಧನ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದ್ದರಿಂದ, ಈ ಕುರಿತು ಕ್ರಮ ಕೈಗೊಳ್ಳುವಂತೆ ಕಂಬಾರರು ದೂರಿನಲ್ಲಿ ತಿಳಿಸಿದ್ದಾರೆ.

Share Post