BengaluruPolitics

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ; ಸರ್ವಪಕ್ಷ ಸಭೆ ಆರಂಭ

ಬೆಂಗಳೂರು; ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮೂರೂ ಪಕ್ಷಗಳ ಮುಖಂಡರು ಭಾಗವಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸದಾನಂದಗೌಡ, ಹೆಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಕೆಆರ್‌ಎಸ್‌ ಡ್ಯಾಂನಲ್ಲಿರುವ ನೀರಿನ ಸಂಗ್ರಹ ಹಾಗೂ ತಮಿಳುನಾಡಿಗೆ ಈಗಾಗಲೇ ಎಷ್ಟು ನೀರು ಬಿಡಲಾಗಿದೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

ಕೆಲ ದಿನಗಳ ಹಿಂದೆ ತಮಿಳುನಾಡಿಗೆ ನೀರು ಹರಿಸಲಾಗಿತ್ತು. ಇದಕ್ಕೆ ಮಂಡ್ಯದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಸರ್ಕಾರ ಸರ್ವಪಕ್ಷ ಸಭೆ ಕರೆದಿದ್ದು, ತಮಿಳುನಾಡಿಗೆ ನೀರುವ ಬಿಡುವ ಚರ್ಚೆ ನಡೆಯುತ್ತಿದೆ.

Share Post